For Quick Alerts
ALLOW NOTIFICATIONS  
For Daily Alerts
 

ರೈತರ ಪ್ರತಿಭಟನೆಗೆ ಯುವರಾಜ್ ಸಿಂಗ್ ತಂದೆ ಬೆಂಬಲ, ವಿವಾದ ಸೃಷ್ಠಿ

Yuvraj Singhs father Yograj Singh supported Farmers Protest

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಎರಡು ಬಾರಿಯ ವಿಶ್ವಕಪ್‌ ವಿಜೇತ ಕ್ರಿಕೆಟರ್ ಯುವರಾಜ್ ಸಿಂಗ್‌ ತಂದೆ, ಮಾಜಿ ಕ್ರಿಕೆಟರ್ ಯೋಗ್ರಾಜ್‌ ಸಿಂಗ್ ಬೆಂಬಲ ಸೂಚಿಸಿದ್ದಾರೆ. ಆದರೆ ಪ್ರತಿಭಟನಾ ಭಾಷಣದ ವೇಳೆ ಯೋಗ್ರಾಜ್‌ ಹೇಳಿಕೆ ವಿವಾದ ಸೃಷ್ಠಿಸಿದೆ.

ದೆಹಲಿ ಗಡಿಯಲ್ಲಿ ಉತ್ತರ ಪ್ರದೇಶ, ರಾಜಸ್ಥಾನ್ ಮತ್ತು ಹರ್ಯಾಣದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯ ಬಿಜೆಪಿ ಸರ್ಕಾರ ತಂದಿರುವ ಕೃಷಿ ಮಸೂದೆಗಳು ರೈತ ವಿರೋಧಿಯಾಗಿದೆ. ಮಾರಾಟಗಾರರ, ದೊಡ್ಡ ಸಂಸ್ಥೆಗಳ ಪರವಾಗಿದೆ ಎಂದು ರೈತರು ಪ್ರತಿಭಟಿಸುತ್ತಿದ್ದಾರೆ.

ಆದರೆ ಪ್ರತಿಭಟನೆಗೆ ಜಗ್ಗದ ಸರ್ಕಾರ ಪೊಲೀಸರನ್ನು ಮುಂದಿಟ್ಟು ಟಿಯರ್ ಗ್ಯಾಸ್, ಜಲಫಿರಂಗಿ, ಲಾಠಿ ಚಾರ್ಜ್ ಮೂಲಕ ರೈತರನ್ನು ಹಿಮ್ಮೆಟ್ಟಿಸಲು ಯತ್ನಿಸಿತ್ತು. ಈ ಘಟನೆ ವಿಶ್ವಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಹೀಗಾಗಿ ಯುವಿ ತಂದೆ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಭಾವೋದ್ವೇಗದ ಹೇಳಿಕೆ ನೀಡಿದ್ದರು. ಆದರೆ ಯುವಿ ತಂದೆಯ ಹೇಳಿಕೆ ಹಿಂದೂ ವಿರೋಧಿಯಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟೀಕಿಸತೊಡಗಿದ್ದಾರೆ.

ರೈತರಿಗೆ ಬೆಂಬಲ ಸೂಚಿಸಿದ್ದಕ್ಕೆ ಯುವಿ ತಂದೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಒಂದಿಷ್ಟು ಮಂದಿ ಮೆಚ್ಚುಗೆ ವ್ಯಕಪಡಿಸುತ್ತಿದ್ದಾರೆ. ಇನ್ನು ಕೆಲವರು ಯೋಗ್ರಾಜ್ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಟೀಕಿಸತೊಡಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ #ArrestYograjSingh ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ.

Story first published: Saturday, December 5, 2020, 20:09 [IST]
Other articles published on Dec 5, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+