ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
ಇಂಡಿಯನ್ ಸೂಪರ್ ಲೀಗ್ ಪೂರ್ವಭಾವಿಗಳು
VS

ಐಎಸ್‌ಎಲ್ 2020-21: ಅಂಕ ಹಂಚಿಕೊಂಡ ಜೆಮ್ಷೆಡ್ಪುರ, ಹೈದರಾಬಾದ್

ISL 2020-21: Profligate Hyderabad end up splitting points with Jamshedpur

ಗೋವಾ: ಇತ್ತಂಡಗಳು ಉತ್ತಮ ಫುಟ್ಬಾಲ್ ಪ್ರದರ್ಶಿಸಿದರೂ ಜೆಮ್ಷೆಡ್ಪುರ ಎಫ್ ಸಿ ಹಾಗೂ ಹೈದಾಬಾದ್ ಎಫ್ ಸಿ ನಡುವಿನ ಹೀರೋ ಇಂಡಿಯನ್ ಸೂಪರ್ ಲೀಗ್ ನ 69ನೇ ಪಂದ್ಯ ಗೋಲಿಲ್ಲದೆ ಡ್ರಾಗೊಂಡಿದ್ದು ಇತ್ತಂಡಗಳು ಅಂಕ ಹಂಚಿಕೊಂಡವು. ಪ್ರಥಮಾರ್ಧದಲ್ಲಿ ಚೆಂಡಿನ ನಿಯಂತ್ರಣದಲ್ಲಿ ಜೆಮ್ಷೆಡ್ಪುರ ತಂಡಡ ಮೇಲುಗೈ ಸಾಧಸಿತ್ತು, ಆದರೆ ದ್ವಿತಿಯಾರ್ಧದಲ್ಲಿ ಹೈದರಾಬಾದ್ ಉತ್ತಮ ರೀತಿಯಲ್ಲಿ ತಿರುಗೇಟು ನೀಡಿತು. ಆದರೆ ಗೋಲು ದಾಖಲಾಗಲಿಲ್ಲ. ಈ ಫಲಿತಾಂಶದೊಂದಿಗೆ ಒಟ್ಟು 18 ಅಂಕಗಳನ್ನು ಗಳಿಸಿರುವ ಹೈದರಾಬಾದ್ ನಾಲ್ಕನೇ ಸ್ಥಾನದವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತು. ಜೆಮ್ಷೆಡ್ಪುರ 7ನೇ ಸ್ಥಾನಕ್ಕೇರಿತು. ಪರಿಣಾಮ ಬೆಂಗಳೂರು 9ನೇ ಸ್ಥಾನಕ್ಕೆ ಕುಸಿಯಿತು.

ಟೀಮ್ ಇಂಡಿಯಾದ ನಿರ್ಭೀತ ಆಟಕ್ಕೆ ಆ ಇಬ್ಬರು ಕಾರಣ ಎಂದ ಭರತ್ ಅರುಣ್ಟೀಮ್ ಇಂಡಿಯಾದ ನಿರ್ಭೀತ ಆಟಕ್ಕೆ ಆ ಇಬ್ಬರು ಕಾರಣ ಎಂದ ಭರತ್ ಅರುಣ್

ಗೋಲಿಲ್ಲದ ಪ್ರಥಮಾರ್ಧ: ಇತ್ತಂಡಗಳು ಸಮಯೋಚಿತ ಆಟ ಪ್ರದರ್ಶಿಸಿದ ಕಾರಣ ಪ್ರಥಮಾರ್ಧದಲ್ಲಿ ಗೋಲು ದಾಖಲಾಗಲಿಲ್ಲ. ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರೂ ಗೋಲು ಗಳಿಸುವ ಅವಕಾಶವನ್ನು ನಿರ್ಮಿಸುವಲ್ಲಿ ವಿಫಲವಾಗಿತ್ತು. ಜೊಯೆಲ್ ಚಿಯಾನೆಸ್ ಅವರಿಗೆ ಸುಲಭವಾಗಿ ಗೋಲು ಗಳಿಸುವ ಅವಕಾಶವಿದ್ದಿತ್ತು, ಆದರೆ ಜೆಮ್ಷೆಡ್ಪುರದ ಗೋಲ್ ಕೀಪರ್ ಟಿಪಿ ರೆಹನೇಶ್ ಉತ್ತಮ ರೀತಿಯಲ್ಲಿ ತಡೆದು ತಂಡಕ್ಕೆ ನೆರವಾದರು.

ಸ್ಟೀಫನ್ ಈಜಿ ಅವರಿಗೂ ಹೆಡರ್ ಮೂಲಕ ಗೋಲು ಗಳಿಸುವ ಅವಕಾಶವಿದ್ದಿತ್ತು. ಆದರೆ ಗುರಿ ಗೋಲ್ ಬಾಕ್ಸ್ ಕಡೆಗೆ ಇರಲಿಲ್ಲ. ಇದರೊಂದಿಗೆ ಪ್ರಥಮಾರ್ಧ ಗೋಲಿಲ್ಲದೆ ಅಂತ್ಯಗೊಂಡಿತು.

ಟಾಟಾ ಪಡೆಗೆ ಜಯದ ಹಂಬಲ

ಟಾಟಾ ಪಡೆಗೆ ಜಯದ ಹಂಬಲ

ಸತತ ಮೂರು ಸೋಲುಗಳ ನಂತರ ಕಂಗೆಟ್ಟಿರುವ ಜೆಮ್ಷೆಡ್ಪುರ ಎಫ್ ಸಿ ತಂಡಕ್ಕೆ ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಪ್ಲೇ ಆಫ್ ಹಂತ ತಲುಪವು ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ವ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜಯ ಕಾಣಬೇಕಾದ ಅನಿವಾರ್ಯತೆ ಇದೆ. ಜಯವನ್ನೇ ಗುರಿಯಾಗಿಸಿಕೊಂಡ ಇತ್ತಂಡಗಳು ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಅಂಗಣಕ್ಕಿಳಿದವು.ಕಳೆದ ವರ್ಷ ಚೆನ್ನೈಯಿನ್ ಎಫ್ ಸಿ ತಂಡ ಮಧ್ಯತರದಲ್ಲಿ ಆದ ಬದಲಾವಣೆಯಲ್ಲಿ ಯಶಸ್ಸು ಕಾಣಲು ಕೊಯ್ಲ್ ಅವರ ಪಾತ್ರ ಪ್ರಮುಖವಾಗಿತ್ತು. ತಂಡವನ್ನು ಫೈನಲ್ ಕೊಂಡೊಯ್ಯವಲ್ಲಿ ಕೊಯ್ಲ್ ಅವರ ಯೋಜನೆಗಳು ಪ್ರಮುಖವಾಗಿತ್ತು. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ತಂಡವನ್ನು ಫೈನಲ್ ಗೆ ಕೊಂಡೊಯ್ಯವಲ್ಲಿ ಕೊಯ್ಲ್ ಪ್ರಮುಖ ಪಾತ್ರವಹಿಸಿದ್ದರು. ಸದ್ಯ ಜೆಮ್ಷೆಡ್ಪುರ ತಂಡ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೂ ತಮ್ಮ ತಂಡ ಪ್ಲೇ ಆಫ್ ಹಂತ ತಲುಪಲಿದೆ ಎಂದು ಕೋಚ್ ಆತ್ಮವಿಶ್ವಾಸದಿಂದ ಹೇಳಿದ್ದಾರೆ.

ಚೌಧರಿಯನ್ನು ತಂಡಕ್ಕೆ ಸೇರಿಸಿಕೊಂಡಿದೆ

ಚೌಧರಿಯನ್ನು ತಂಡಕ್ಕೆ ಸೇರಿಸಿಕೊಂಡಿದೆ

ಇದಕ್ಕಾಗಿ ತಂಡ ಸೈಮಿನ್ಲೆನ್ ಡೌಂಗಲ್ ಅವರನ್ನು ಸಾಲವಾಗಿ ಪಡೆದಿದ್ದು ಮತ್ತು ಫಾರೂಕ್ ಚೌಧರಿಯನ್ನು ತಂಡಕ್ಕೆ ಸೇರಿಸಿಕೊಂಡಿದೆ, ಇಬ್ಬರೂ ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ. ಎದುರಾಳಿ ತಂಡಕ್ಕೆ ಹೋಲಿಕೆ ಮಾಡಿ ಹೇಳುವುದಾದರೆ, ಹೈದರಾಬಾದ್ ತಂಡ ಉತ್ತಮ ಸ್ಥಿತಿಯಲ್ಲಿದೆ. ಹಿಂದಿನ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿರಲಿಲ್ಲ. ಜೆಮ್ಷೆಡ್ಪುರದ ಡಿಫೆನ್ಸ್ ವಿಭಾಗ ಇತ್ತೀಚಿನ ಪಂದ್ಯಗಳಲ್ಲಿ ದುರ್ಬಲಗೊಂಡಿದ್ದು, ಹಿಂದಿನ ಮೂರು ಪಂದ್ಯಗಳಲ್ಲಿ 9 ಗೋಲುಗಳನ್ನು ನೀಡಿದೆ. ಹೈದರಾಬಾದ್ ಇದರ ಸದುಪಯೋಗ ಪಡೆಯಲು ಉತ್ಸುಕವಾಗಿದೆ. ಆದರೆ ಈ ಹಿಂದೆ ಮೂರು ಬಾರಿ ಪರಸ್ಪರ ಮುಖಾಮುಖಿಯಾದಾಗ ಹೈದರಾಬಾದ್ ತಂಡಕ್ಕೆ ಜೆಮ್ಷೆಡ್ಪುರ ವಿರುದ್ಧ ಜಯ ಗಳಿಸಲು ಸಾಧ್ಯವಾಗಲಿಲ್ಲ.

ತಂಡದ ಹಿನ್ನಡೆಗೆ ಪ್ರಮುಖ ಕಾರಣ

ತಂಡದ ಹಿನ್ನಡೆಗೆ ಪ್ರಮುಖ ಕಾರಣ

ಜೆಮ್ಷೆಡ್ಪುರದ ಯಶಸ್ಸಿನಲ್ಲಿ ಪ್ರಮುಖಪಾತ್ರವಹಿಸಿದ್ದ ನೆರಿಜಸ್ ವಾಸ್ಕಿಸ್ ಕಳೆದ ಎರಡು ಪಂದ್ಯಗಳಲ್ಲಿ ಗೋಲು ಗಳಿಸಿರಲಿಲ್ಲ ಇದು ತಂಡದ ಹಿನ್ನಡೆಗೆ ಪ್ರಮುಖ ಕಾರಣವಾಗಿದೆ. ಆದರೆ ಹಿಂದಿನ ಸಾಧನೆಗಳನ್ನು ಮೆಲುಕು ಹಾಕುವುದಕ್ಕಿಂತ ಇಂದಿನ ಪಂದ್ಯದ ಬಗ್ಗೆ ಗಮನ ಹರಿಸಿದರೆ ಉತ್ತಮ ಪಂದ್ಯವೊಂದು ರೂಪುಗೊಳ್ಳಲು ಸಾಧ್ಯ.

Story first published: Monday, January 25, 2021, 8:30 [IST]
Other articles published on Jan 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X