ವಿಶ್ರಾಂತ ಮನಸ್ಥಿತಿ
"ಎರಡನೇ ಲೆಗ್ ಪಂದ್ಯಕ್ಕೆ ಮುನ್ನ ಹಬ್ಬಾಸ್ ಅವರು ಬಹಳ ವಿಶ್ರಾಂತ ಮನಸ್ಥಿತಿಯಲ್ಲಿರುವುದು ಕಂಡುಬಂತು, "ಯಾವುದೇ ರೀತಿಯ ಒತ್ತಡವಿಲ್ಲ. ಇದು ಒಂದು ಉತ್ತಮ ಅವಕಾಶದ ಕುರಿತಾಗಿದೆ. ಇದು ಮತ್ತೆ ಸಿಗುವುದಿಲ್ಲ. ನಾವು ಅದನ್ನು ಸಂಭ್ರಮಿಸಬೇಕು. ನಾವು ನಮ್ಮಲ್ಲಿರುವ ಉತ್ತಮ ಪ್ರದರ್ಶನ ನೀಡಿ ಸೆಮಿಫೈನಲ್ ಹಂತವನ್ನು ಸಂಭ್ರಮಿಸಬೇಕು," ಎಂದಿದ್ದಾರೆ.
ಸೋಲು ಕಂಡಿರಲಿಲ್ಲ
ಖಾಲೀದ್ ಜಮಿಲ್ ಅವರ ಪಡೆ ಕಳೆದ 10 ಪಂದ್ಯಗಳಲ್ಲಿ ಸೋಲು ಕಂಡಿರಲಿಲ್ಲ, ಈ ಬಗ್ಗೆ ಗಮನ ಸೆಳೆದಾಗ, ಹಬ್ಬಾಸ್ ಅವರ ಉತ್ತರದಲ್ಲಿ ತಾಳ್ಮೆ ಮನೆಮಾಡಿತ್ತು. "ತಾಳ್ಮೆಯಿಂದ ಇರುವುದೇ ನಮ್ಮ ರಣತಂತ್ರ. ಅತ್ಯಂತ ತಾಳ್ಮೆಯಿಂದ ಆಡಿ ಫೈನಲ್ ತಲುಪುವುದು ನಮ್ಮ ಗುರಿಯಾಗಿದೆ," ಎಂದರು.
ಬಾಗನ್ ತಂಡವು ಡೇವಿಡ್ ವಿಲಿಯಮ್ಸ್ ಮತ್ತು ರಾಯ್ ಕೃಷ್ಣ ಅವರನ್ನು ಹೆಚ್ಚು ಅವಲಂಭಿಸಿದ್ದು, ಇಬ್ಬರ ಋತುವಿನುದ್ದಕ್ಕೂ ಸ್ಥಿರ ಪ್ರದರ್ಶನ ತೋರಿದ್ದಾರೆ. ಜಮೀಲ್ ಅವರು ಆಗಮಿಸಿದಾಗಿನಿಂದ ಸೋಲನ್ನೇ ಕಂಡಿರದ ನಾರ್ಥ್ ಈಸ್ಟ್ ಎಟಿಕೆಎಂಬಿ ವಿರುದ್ಧ ಜಯ ಗಳಿಸಿ ಮೊದಲ ಬಾರಿಗೆ ಫೈನಲ್ ತಲಪುವ ಗುರಿ ಹೊಂದಿದೆ.
ಫಲಿತಾಂಶದ ಕಡೆಗೆ ಹೆಚ್ಚು ಗಮನ
"ಇದು ಮಾಡು ಇಲ್ಲವೆ ಮಡಿ ಪಂದ್ಯವಾದ ಕಾರಣ ನಾವು ಫಲಿತಾಂಶದ ಕಡೆಗೆ ಹೆಚ್ಚು ಗಮನಹರಿಸಲಿದ್ದೇವೆ. ಒತ್ತಡ ಇದ್ದೇ ಇರುತ್ತದೆ. ಒತ್ತಡಕ್ಕೆ ಹೊಂದಿಕೊಂಡು ಖುಷಿ ಪಡಿ ಎಂದಿದ್ದೇನೆ. ಹಿಂದಿನ ಪಂದ್ಯದ ಗೋಲು ವ್ಯತ್ಯಯ ಇಲ್ಲದ ಕಾರಣ ಇತ್ತಂಡಗಳಿಗೆ ಗೆಲ್ಲಬೇಕಾಗಿದೆ. ಇದು ಇತ್ತಂಡಗಳಿಗೂ ಅನ್ವಯ,ಗೋಲು ಗಳಿಸಲು ಸಾಕಷ್ಟು ಅವಕಾಶಗಳನ್ನು ನಿರ್ಮಿಸಿ ಅವರ ಮೇಲೆ ಒತ್ತಡ ತರಬೇಕು. ಸಬಲ ಸಾಧಸಿಸಿದೆ 30 ನಿಮಿಷಗಳ ಅವಕಾಶ ಸಿಗುತ್ತದೆ, "ಎಂದು ಜಮೀಲ್ ಹೇಳಿದ್ದಾರೆ.