ಹಾಕಿ ಇಂಡಿಯಾ ಭಾರತ ಮಹಿಳಾ ಹಾಕಿ ತಂಡದ ನಾಯಕಿಯನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಹಾಕಿ ತಂಡದ ನಾಯಕಿ ರಾಣಿ ರಾಂಪಲ್ ಅವರು ಈ ಪ್ರತಿಷ್ಟಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ರಾಣಿ ರಾಂಪಲ್ ನಾಯಕತ್ವದಲ್ಲಿನ ಭಾರತ ತಂಡ 2017ರಲ್ಲಿ ಮಹಿಳಾ ಏಷ್ಯಾ ಕಪ್ ಜಯಸಿತ್ತು.
ರಾಣಿ ರಾಂಪಲ್ ನಾಯಕತ್ವದಲ್ಲಿನ ಭಾರತ ತಂಡ 2017ರಲ್ಲಿ ಮಹಿಳಾ ಏಷ್ಯಾ ಕಪ್ ಜಯಸಿತ್ತು. 2018ರ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದ ರಾಣಿ ರಾಂಪಲ್ ನೇತೃತ್ವದ ತಂಡ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಸಹಾಯ ಮಾಡುವ ನಿರ್ಣಾಯಕ ಗುರಿಯನ್ನು ಗಳಿಸಿಕೊಂಡಿತ್ತು.
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ
ಈ ಅವಧಿಯಲ್ಲಿ ಭಾರತದ ವನಿತೆಯರ ತಂಡ ತನ್ನ ಅತ್ಯುತ್ತಮ ನಂಬರ್ 9ನೇ ಸ್ಥಾನಕ್ಕೇರಿತ್ತು.ರಾಣಿ ರಾಂಪಲ್ 2016ರಲ್ಲಿ ಅರ್ಜುನ ಪ್ರಶಸ್ತಿ ಹಾಗೂ 2020ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಸರ್ದಾರ್ ಸಿಂಗ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದಿರುವ ಕೊನೆಯ ಹಾಕಿ ಆಟಗಾರ. ಪ್ರತಿಷ್ಠಿತ ಪ್ರಶಸ್ತಿ ಪಡೆಯುವ ಎಲ್ಲಾ ಅರ್ಹತೆಗಳು ರಾಣಿ ರಾಂಪಲ್ ಅವರಿಗೆ ಇದೆ ಎಂದು ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಸ್ತಕ್ ಅಹ್ಮದ್ ಹೇಳಿದ್ದಾರೆ.
'ಖೇಲ್ ರತ್ನ'ಕ್ಕೆ ಟಿಟಿ ಸುಂದರಿ ಮಣಿಕಾ ಬಾತ್ರಾ ಹೆಸರು ಶಿಫಾರಸು
ಇದೇ ಸಂದರ್ಭದಲ್ಲಿ ಇನ್ನು ಮೂವರು ಆಟಗಾರ್ತಿಯರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ವಂದನಾ ಕಟಾರಿಯಾ, ಮೊನಿಕಾ ಮತ್ತು ಹರ್ಮನ್ ಪ್ರೀತ್ ಸಿಂಗ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.