ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಬೆಂಗಳೂರು ಬುಲ್ಸ್‌ ತಂಡದ ಮಾಜಿ ಕೋಚ್‌ ಬಿಸಿ ರಮೇಶ್ ಬಂಧನ!

Arjuna Awardee BC Ramesh Arrested for Assulting a Lady Kabaddi Player

ಬೆಂಗಳೂರು, ಜನವರಿ 22: ಕಬಡ್ಡಿ ಆಟಗಾರ್ತಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮಾಜಿ ಕಬಡ್ಡಿ ಆಟಗಾರ, ಪ್ರೊ ಕಬಡ್ಡಿ ಲೀಗ್ ಹಾಲಿ ಚಾಂಪಿಯನ್ಸ್ ಬೆಂಗಾಲ್ ವಾರಿಯರ್ಸ್ ಕೋಚ್‌, ಅರ್ಜುನ ಪ್ರಶಸ್ತಿ ವಿಜೇತ ಬಿ.ಸಿ. ರಮೇಶ್ ಅವರನ್ನು ಪೊಲೀಸರು ಮಂಗಳವಾರ (ಜನವರಿ 21) ಬಂಧಿಸಿದ್ದಾರೆ.

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿ ಒಬ್ಬರ ಮೇಲೆ ಬಿ.ಸಿ. ರಮೇಶ್ ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಹಲ್ಲೆ ಮಾಡಿದ್ದಾರೆ ಎಂದು ಸಂಪಂಗಿರಾಮನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ರಮೇಶ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ತಿವಾರಿ ತ್ರಿಶತಕ, ಶಹಬಾಜ್ ಹ್ಯಾಟ್ರಿಕ್ ವಿಕೆಟ್, ಬೆಂಗಾಲ್‌ಗೆ ಭರ್ಜರಿ ಜಯತಿವಾರಿ ತ್ರಿಶತಕ, ಶಹಬಾಜ್ ಹ್ಯಾಟ್ರಿಕ್ ವಿಕೆಟ್, ಬೆಂಗಾಲ್‌ಗೆ ಭರ್ಜರಿ ಜಯ

ಬಿ.ಸಿ. ರಮೇಶ್ ಅವರು ಅಂತಾರಾಷ್ಟ್ರೀಯ ಮಟ್ಟದ ಆಟಗಾರರಾಗಿದ್ದವರು. ಬೆಂಗಳೂರು ಬುಲ್ಸ್, ಪುನೇರಿ ಪಲ್ಟನ್ಸ್‌ ಮತ್ತು ಬೆಂಗಾಲ್ ವಾರಿಯರ್ಸ್‌ ಕಬಡ್ಡಿ ತಂಡದ ಮುಖ್ಯ ಕೋಚ್ ಆಗಿದ್ದರು. ಆಟಗಾರ್ತಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಡ್ಡಿ ಅಸೋಸಿಯೇಷನ್‌ನ ಕಾರ್ಯದರ್ಶಿ ಮುನಿರಾಜು, ಷಣ್ಮುಗ, ನರಸಿಂಹ ಅವರ ಮೇಲೂ ದೂರು ದಾಖಲಾಗಿದ್ದು, ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲ್ಲೆಗೊಳಗಾದ ಆಟಗಾರ್ತಿಗೆ ತೀವ್ರ ಪೆಟ್ಟಾಗಿದೆ ಎಂದು ಸಂಬಂಧಿಗಳು ಹೇಳಿದ್ದು, ಹೊಡೆತದ ತೀವ್ರತೆಗೆ ಜ್ಞಾನ ತಪ್ಪಿದ್ದು, ಇದೀಗವಷ್ಟೆ ಸುಧಾರಿಸಿಕೊಳ್ಳುತ್ತಿದ್ದಾರೆಂದು ವೈದ್ಯರು ತಿಳಿಸಿರುವುದಾಗಿ 'ಒನ್‌ಇಂಡಿಯಾ ಕನ್ನಡ'ಕ್ಕೆ ಮಾಹಿತಿ ನೀಡಿದ್ದಾರೆ.

ನ್ಯೂಜಿಲೆಂಡ್‌ನಲ್ಲಿ ರೋಹಿತ್‌ಗೆ ದೊಡ್ಡ ಸವಾಲಿನ ಸಂಗತಿಯೊಂದಿದೆ: ಸಚಿನ್ನ್ಯೂಜಿಲೆಂಡ್‌ನಲ್ಲಿ ರೋಹಿತ್‌ಗೆ ದೊಡ್ಡ ಸವಾಲಿನ ಸಂಗತಿಯೊಂದಿದೆ: ಸಚಿನ್

ಕಂಠೀರವ ಸ್ಟೇಡಿಯಂ ನಲ್ಲಿ ಬೆಳಿಗ್ಗೆ ತಾಲೀಮು ನಡೆಸುವಾಗ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಭೇಟಿ ನೀಡಿದ್ದರು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲ್ಲೆಗೊಳಗಾದ ಆಟಗಾರ್ತಿ ಅಧಿಕಾರಿಯನ್ನು ಸಹಾಟಗಾರರಿಗೆ ಮತ್ತು ಕೋಚ್‌ ಗೆ ಪರಿಚಯ ಮಾಡಿಸಿದ್ದಾರೆ. ಅಧಿಕಾರಿಯು ಸ್ಪೂರ್ತಿಯ ಮಾತುಗಳನ್ನಾಡಿ ತೆರಳಿದ್ದಾರೆ.

ಆದರೆ ಸಂಜೆ ತಾಲೀಮಿನ ವೇಳೆಗೆ ಸ್ಟೇಡಿಯಂ ಗೆ ಬಂದ ಬಿ.ಸಿ.ರಮೇಶ್ ಈ ಬಗ್ಗೆ ತಕರಾರು ತೆಗೆದಿದ್ದು, ಆಟಗಾರ್ತಿಯನ್ನು ಎಲ್ಲರೆದುರು ನಿಂದಿಸಿದ್ದಾರೆ. ನಂತರ ಕಚೇರಿಗೆ ಬರಲು ಹೇಳಿದ್ದು, ಅಲ್ಲಿಯೂ ಜಗಳವಾಡಲಾಗಿ ಆಟಗಾರ್ತಿಗೆ ಹೊಡೆದಿದ್ದಾರೆ.

ಸಹಾಟಗಾರ್ತಿಯರು ಹೊಡೆತ ತಿಂದ ಆಟಗಾರ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಘಟನೆಯನ್ನು ಹಲ್ಲೆಗೊಳಗಾದ ಆಟಗಾರ್ತಿಯ ಸಹೋದರ ನವೀನ್ 'ಒನ್‌ಇಂಡಿಯಾ ಕನ್ನಡ'ಕ್ಕೆ ವಿವರಿಸಿದರು.

Story first published: Sunday, May 3, 2020, 10:58 [IST]
Other articles published on May 3, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X