ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ನ ಜಲಂಧರ್ನ ಮಲಿಯನ್ ಎಂಬ ಹಳ್ಳಿಯಲ್ಲಿ ನಡೆದಿದೆ.
ಮಲಿಯನ್ನಲ್ಲಿ ನಡೆದ ಕಬಡ್ಡಿ ಕಪ್ನಲ್ಲಿ ಭಾಗಿಯಾಗಿದ್ದ ಸಂದೀಪ್ ನಂಗಲ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಆತನ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತು ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ.
ಜಲಂಧರ್ (ಗ್ರಾಮೀಣ) ಉಪ ಪೊಲೀಸ್ ವರಿಷ್ಠಾಧಿಕಾರಿ ಲಖ್ವಿಂದರ್ ಸಿಂಗ್ ವರದಿಯನ್ನು ದೃಢಪಡಿಸಿದ್ದು, ಕಬಡ್ಡಿ ಆಟಗಾರನ ದೇಹದ ಮೇಲೆ ಎಂಟರಿಂದ ಹತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಸಂದೀಪ್ ಒಂದು ದಶಕಕ್ಕೂ ಹೆಚ್ಚು ಕಾಲ ಕಬಡ್ಡಿ ಜಗತ್ತಿನಲ್ಲಿ ಮಿಂಚಿದ್ದರು. ಪಂಜಾಬ್ ಹೊರತುಪಡಿಸಿ ಕೆನಡಾ, ಯುಎಸ್ಎ, ಯುಕೆಗಳಲ್ಲಿ ಉತ್ತಮವಾಗಿ ಆಡಿದರು. ಅವರು ಭಾರತೀಯ ಕಬ್ಬಡಿ ಸ್ಪರ್ಧಿಯಾಗಿದ್ದು, ಅವರ ವಿಜಯಗಳ ಖಾತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಖ್ಯಾತಿಯನ್ನು ಗಳಿಸಿದರು.
ಅವರು ಕಬಡ್ಡಿ ಫೆಡರೇಶನ್ ಅನ್ನು ನಿರ್ವಹಿಸುತ್ತಿದ್ದರು ಅವರ ಮರಣದ ಮೊದಲು, ಒಕ್ಕೂಟಗಳ ನಡುವೆ ಜಗಳವಿತ್ತು ಎಂದು ಅಂದಾಜಿಸಲಾಗಿದೆ.