ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಕಾಫಿ ನಾಡಿನ ಹುಡುಗಿ ರಕ್ಷಿತಾಗೆ 'ಇಂಡಿಯನ್ ಸ್ಪೋರ್ಟ್ಸ್ ಆನರ್ಸ್ ಅವಾರ್ಡ್'

By ಚಿಕ್ಕಮಗಳೂರು ಪ್ರತಿನಿಧಿ
Athlete from Chikmagalur recieved indian sports honours award

ಚಿಕ್ಕಮಗಳೂರು, ಅಕ್ಟೋಬರ್ 1: ಕಾಫಿ ನಾಡು ಚಿಕ್ಕಮಗಳೂರಿನ ಹುಡುಗಿ ರಕ್ಷಿತಾ ರಾಜು ಅವರಿಗೆ 'ಇಂಡಿಯನ್ ಸ್ಪೋರ್ಟ್ಸ್ ಆನರ್ಸ್ ಅವಾರ್ಡ್' ಲಭಿಸಿದೆ. ಚಿತ್ರೋದ್ಯಮ, ಕ್ರಿಕೆಟ್‌ ಮತ್ತು ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದವರಿಗೆ ನೀಡುವ ಪ್ರಶಸ್ತಿಯಿದು.

ಎಮರ್ಜಿಂಗ್‌ ಏಷ್ಯಾಕಪ್: ಭಾರತ ತಂಡ ಪ್ರಕಟ, ಕನ್ನಡಿಗ ಶರತ್ ನಾಯಕಎಮರ್ಜಿಂಗ್‌ ಏಷ್ಯಾಕಪ್: ಭಾರತ ತಂಡ ಪ್ರಕಟ, ಕನ್ನಡಿಗ ಶರತ್ ನಾಯಕ

ಮುಂಬೈನಲ್ಲಿ ಸೆಪ್ಟೆಂಬರ್ 27ರಂದು ನಡೆದ ಈ ಬಾರಿಯ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪಾಲ್ಗೊಂಡಿದ್ದರು. ಏಷ್ಯಾ ಪ್ಯಾರಾ ಗೇಮ್ಸ್‌ನಲ್ಲಿ ಪಾಲ್ಗೊಂಡಿದ್ದ ರಕ್ಷಿತಾ, 1500 ಮೀ. ಓಟದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಈ ಗೌರವ ಸ್ವೀಕರಿಸಿದ್ದಾರೆ.

Athlete from Chikmagalur recieved indian sports honours award

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕುಡ್ನಹಳ್ಳಿಯವರಾದ ರಕ್ಷಿತಾ, ಚಿಕ್ಕಮಗಳೂರಿನ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ 10ನೇ ತರಗತಿ ಕಲಿಯುತ್ತಿದ್ದಾರೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಕ್ಷಿತಾ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದರು.

ತ್ರಿಕೋನ ಸರಣಿ: ಅಂತಾರಾಷ್ಟ್ರೀಯ ಟಿ20 ಇತಿಹಾಸ ಬರೆದ ಸಿಂಗಾಪುರ!ತ್ರಿಕೋನ ಸರಣಿ: ಅಂತಾರಾಷ್ಟ್ರೀಯ ಟಿ20 ಇತಿಹಾಸ ಬರೆದ ಸಿಂಗಾಪುರ!

ಏಷ್ಯಾ ಪ್ಯಾರಾ ಗೇಮ್ಸ್‌ ಬಂಗಾರ ಗೆದ್ದಾಗ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಕನ್ನಡತಿಗೆ ಅಭಿನಂದಿಸಿದ್ದರು. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್, ಬಾಲಿವುಡ್ ಸ್ಟಾರ್ ನಟರಾದ ಅಮಿತಾಬ್ ಬಚ್ಚಬ್, ಪ್ರಿಯಾಂಕ ಚೋಪ್ರಾ, ರಸ್ಲರ್ ವಿನೇಶ್ ಫೋಗಟ್ ಮೊದಲಾದವರು ಪಾಲ್ಗೊಂಡಿದ್ದರು. ರಕ್ಷಿತಾ ಕೋಚ್ ರಾಹುಲ್ ಕೂಡ ಉಪಸ್ಥಿತರಿದ್ದರು.

Story first published: Tuesday, October 1, 2019, 0:12 [IST]
Other articles published on Oct 1, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X