ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2023ರ ಐಸಿಸಿ ವಿಶ್ವಕಪ್ ಪ್ರಶಸ್ತಿಗಾಗಿ ಭಾನುವಾರ, ನವೆಂಬರ್ 19ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ.
ಅತಿ ದೊಡ್ಡ ಕ್ರೀಡಾಕೂಟಗಳಲ್ಲಿ ಒಂದು ಎಂದು ಹೇಳಲಾಗುವ ಏಕದಿನ ವಿಶ್ವಕಪ್ನ ಹೈ-ವೋಲ್ಟೇಜ್ ಪಂದ್ಯವು ಹಲವು ಗಣ್ಯಾತಿಗಣ್ಯರಿಂದ ಅಲಂಕರಿಸಲ್ಪಡುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಸಹ ಆಹ್ವಾನಿಸಲಾಗಿದೆ. ಅವರು ಫೈನಲ್ ಪಂದ್ಯದ ದಿನ ಬಂದಿಳಿಯುವ ಸಾಧ್ಯತೆಯೂ ಇದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಭಾನುವಾರ ಮಧ್ಯಾಹ್ನ ನರೇಂದ್ರ ಮೋದಿ ಅವರು ಫೈನಲ್ ಪಂದ್ಯ ವೀಕ್ಷಿಸಲು ಬಂದಿಳಿಯಲಿದ್ದಾರೆ ಎಂದು ಗುಜರಾತ್ ಪೊಲೀಸ್ ಮೂಲಗಳು ತಿಳಿಸಿವೆ. ಗಾಂಧಿನಗರದ ರಾಜಭವನದಲ್ಲಿ ರಾತ್ರಿ ತಂಗುವ ಸಾಧ್ಯತೆ ಇದೆ.
ವಿಶೇಷ ರಕ್ಷಣಾ ಪಡೆ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ಸ್ಥಳೀಯ ಪೊಲೀಸರು ಮುಂಗಡ ಭದ್ರತಾ ಸಂಪರ್ಕ (ಎಎಸ್ಎಲ್) ಎಂಬ ತಮ್ಮ ದಿನನಿತ್ಯದ ಕಸರತ್ತನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿಯ ಪ್ರತಿ ನಿಮಿಷದ ವಿವರಗಳನ್ನು ಪರಿಶೀಲಿಸುವುದರ ಜೊತೆಗೆ ಪ್ರಧಾನಮಂತ್ರಿ ಸಂಚರಿಸುವ ಸ್ಥಳ ಮತ್ತು ಮಾರ್ಗವನ್ನು ತಪಾಸಣೆಯನ್ನು ಮಾಡಲಾಗಿದೆ.

ಇನ್ನು ಭಾರತದ ಇಬ್ಬರು ವಿಶ್ವಕಪ್ ವಿಜೇತ ನಾಯಕರಾದ ಕಪಿಲ್ ದೇವ್ ಮತ್ತು ಎಂಎಸ್ ಧೋನಿ ಸೇರಿದಂತೆ ಈವರೆಗೆ ಏಕದಿನ ವಿಶ್ವಕಪ್ ಗೆದ್ದ ನಾಯಕರನ್ನು ಕೂಡ ಆಹ್ವಾನಿಸಲಾಗಿದೆ. ಬಹುತೇಕರು ಫೈನಲ್ ಪಂದ್ಯವನ್ನು ಅಲಂಕರಿಸುವ ಸಾಧ್ಯತೆಯಿದೆ.
ಆದರೆ, ಸದ್ಯ ಭ್ರಷ್ಟಾಚಾರ ಆರೋಪದಲ್ಲಿ ಜೈಲಿನಲ್ಲಿರುವ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಭಾಗವಹಿಸುವುದು ಅಸಾಧ್ಯವಾಗಿದೆ.
ಇನ್ನು ಭಾರತದ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಮತ್ತಿತರ ಮಾಜಿ ಕ್ರಿಕೆಟಿಗರು ಕೂಡ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸುವ ನಿರೀಕ್ಷೆಯಿದೆ.
ಕಳೆದ ತಿಂಗಳು ಭಾರತ ಮತ್ತು ಪಾಕಿಸ್ತಾನ ಪಂದ್ಯದಂತೆಯೇ, ಫೈನಲ್ ಪಂದ್ಯವೂ ಕೂಡ ಪ್ರೇಕ್ಷಕರಿಗೆ ಮನರಂಜನೆ ನೀಡುವ ಭರವಸೆ ನೀಡುತ್ತದೆ. ಖಲಾಸಿ ಖ್ಯಾತಿಯ ಗಾಯಕರಾದ ದುವಾ ಲಿಪಾ ಮತ್ತು ಆದಿತ್ಯ ಗಾಧವಿ ಅವರು ಕೆಲವು ಜನಪ್ರಿಯ ಹಾಡುಗಳನ್ನು ಹಾಡಿದರೆ, ಸಂಗೀತ ನಿರ್ದೇಶಕ ಪ್ರೀತಮ್ ಚಕ್ರವರ್ತಿ ಅವರ ಕೆಲವು ಬಾಲಿವುಡ್ ಚಾರ್ಟ್ಬಸ್ಟರ್ಗಳನ್ನು ಪ್ರದರ್ಶಿಸಲಿದ್ದಾರೆ.
ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡ ಕೂಡ ವಿಶ್ವಕಪ್ ಫೈನಲ್ಗೆ ಏರ್ ಶೋ ಪ್ರದರ್ಶನ ನೀಡಲಿದೆ. ಲೋಹದ ಹಕ್ಕಿಗಳು ಅಹಮದಾಬಾದ್ ಆಕಾಶವನ್ನು ಬೆಳಗಿಸುತ್ತವೆ. ಇದು ಪ್ರೇಕ್ಷಕರಿಗೆ ಅದ್ಭುತ ಅನುಭವವನ್ನು ನೀಡಲಿದೆ.
ಪ್ರಮುಖ ರಾಜಕಾರಣಿಗಳು ಮತ್ತು ಮಾಜಿ ಕ್ರಿಕೆಟಿಗರನ್ನು ಹೊರತುಪಡಿಸಿ, ಐ-ವೋಲ್ಟೇಜ್ ಫೈನಲ್ ಪಂದ್ಯಕ್ಕೆ ಕೆಲವು ಜನಪ್ರಿಯ ಸೆಲೆಬ್ರಿಟಿಗಳಿಂದ ಕ್ರೀಡಾಂಗಣವು ಅಲಂಕರಿಸುತ್ತದೆ.
ಖ್ಯಾತ ನಟರಾದ ಅಮಿತಾಭ್ ಬಚ್ಚನ್, ರಜನಿಕಾಂತ್, ಕಮಲ್ ಹಾಸನ್, ಮೋಹನ್ ಲಾಲ್, ವಿಕ್ಟರಿ ವೆಂಕಟೇಶ್, ನಾಗಾರ್ಜುನ ಮತ್ತು ರಾಮ್ ಚರಣ್ ಅವರಂತಹ ಹೆಸರುಗಳು ಭಾರತ ತಂಡದ ಆಟಗಾರರನ್ನು ಸ್ಟ್ಯಾಂಡ್ಗಳಿಂದ ಬೆಂಬಲಿಸಲಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ನಿಂದ (ಐಸಿಸಿ) ಟ್ರೋಫಿಗಾಗಿ ಸೆಣಸಾಡುವ ಪಂದ್ಯದಲ್ಲಿ ಯಾರು ಯಾರು ಎಂಬುದನ್ನು ಪಂದ್ಯವು ಎದುರು ನೋಡಲಿದೆ. ಇದೆಲ್ಲದರ ಹೊರತಾಗಿ, ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರ ನಿಕಟ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಕೂಡ ಆಗಮಿಸಲಿದ್ದಾರೆ.
2023ರ ವಿಶ್ವಕಪ್ ಅಭಿಯಾನದಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಮತ್ತು ರೋಹಿತ್ ಶರ್ಮಾ ನಾಯಕತ್ವದ ತಂಡವು ಪಂದ್ಯಾವಳಿಯ ಉದ್ದಕ್ಕೂ ಉತ್ತಮ ಸಾಮರ್ಥ್ಯವನ್ನು ತೋರಿಸಿದೆ ಮತ್ತು 'ವಿಶ್ವ ಚಾಂಪಿಯನ್ಸ್' ಪ್ರಶಸ್ತಿಗಾಗಿ ಎಲ್ಲವನ್ನೂ ನೀಡಲಿದೆ.