For Quick Alerts
ALLOW NOTIFICATIONS  
For Daily Alerts

ತವರಿಗೆ ಆಗಮಿಸಿದ ಏಷ್ಯನ್ ಚಿನ್ನದ ಹುಡುಗಿ ಪೂವಮ್ಮಗೆ ಅದ್ದೂರಿ ಸ್ವಾಗತ

By Kiran
Golden girl MR Poovamma gets a warm welcome in Mangaluru

ಮಂಗಳೂರು, ಸೆಪ್ಟೆಂಬರ್.6: ಇಂಡೊನೇಷ್ಯಾದ ಜಕಾರ್ತದಲ್ಲಿ ಕೊನೆಗೊಂಡ 18ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಅದರಲ್ಲೂ ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ ಮಿಶ್ರ ರಿಲೇಯಲ್ಲಿ ಬೆಳ್ಳಿಯ ಪದಕ ಗೆದ್ದ ತಂಡದತ್ತ ವಿಶ್ವವೇ ತಿರುಗಿ ನೋಡುತ್ತಿದ್ದು, ಈ ರಿಲೇ ತಂಡದಲ್ಲಿ ಕನ್ನಡತಿ ಅದರಲ್ಲೂ ಮಂಗಳೂರಿನ ಪೂವಮ್ಮ ಇದ್ದರು ಎನ್ನುವುದು ಗಮನಾರ್ಹ ಸಂಗತಿ.

ಚಿನ್ನ ಬೆಳ್ಳಿ ಕಂಚುಗಳ ನಡುವೆ ಭಾರತಕ್ಕೆ ನಿರಾಶೆಯ ಪದಕ

ಚಿನ್ನದ ಹಾಗೂ ಬೆಳ್ಳಿ ಪದಕ ಗೆದ್ದ ಭಾರತೀಯ ತಂಡದ ಪ್ರಮುಖ ಓಟಗಾರ್ತಿ ಎಂ.ಆರ್. ಪೂವಮ್ಮ ಅವರು ಇಂದು ಗುರುವಾರ ತವರಿಗೆ ಮರಳಿದ್ದರು . ಏಷ್ಯಾಡ್ ನಲ್ಲಿ ಭಾರತದ ಕೀರ್ತಿ ಪತಾಕೆ ಬಾನೆತ್ತರಕ್ಕೆ ಹಾರಿಸಿ ಮಂಗಳೂರಿಗೆ ಆಗಮಿಸಿದ್ದ ಪೂವಮ್ಮ ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಏಷ್ಯನ್‌ ಗೇಮ್ಸ್ ನಲ್ಲಿ‌ ಕಂಚಿನ ಪದಕ‌ ಗೆದ್ದ ಕುಂದಾನಗರಿ ಕುವರಿ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ನಡೆದ ಸ್ವಾಗತ ಸಂದರ್ಭ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದ ವ್ಯಾಸ ಕಾಮತ್, ಮಾಜಿ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಪೂವಮ್ಮ ಅವರನ್ನು ಅದ್ದೂರಿಯಿಂದ ಬರ ಮಾಡಿಕೊಂಡರು.

ಸಾಧನೆಗೆ ಪೋಷಕರ ಪ್ರೋತ್ಸಾಹ ಕಾರಣ

ಸಾಧನೆಗೆ ಪೋಷಕರ ಪ್ರೋತ್ಸಾಹ ಕಾರಣ

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೂವಮ್ಮ 'ನನ್ನ ಪೋಷಕರ ಪ್ರೋತ್ಸಾಹ, ಬೆಂಬಲದಿಂದಾಗಿಯೇ ನಾನು ಇಂದು ಈ ಸಾಧನೆ ಮಾಡಲು ಸಾಧ್ಯವಾಗಿದೆ. ಅದಕ್ಕಾಗಿ ಪ್ರಥಮವಾಗಿ ನನ್ನ ಈ ಪದಕಗಳು ಪೋಷಕರು ಮತ್ತು ಕೊಡಗಿನ ನೆರೆ ಸಂತ್ರಸ್ತರಿಗೆ ಅರ್ಪಿಸುತ್ತೇನೆ' ಎಂದು ಹೇಳಿದರು.

ವಿಶ್ವ ಚಾಂಪಿಯನ್ ಶಿಪ್‌ಗೆ ತಯಾರಿ

ವಿಶ್ವ ಚಾಂಪಿಯನ್ ಶಿಪ್‌ಗೆ ತಯಾರಿ

ತವರಿನ ಸ್ವಾಗತಕ್ಕೆ ತುಂಬಾ ಖುಷಿಯಾಗುತ್ತಿದೆ. 2014ರಲ್ಲಿಯೂ ಪದಕ ಗೆದ್ದು ಮರಳಿದಾಗ ಇದೇ ರೀತಿಯಾದ ಸ್ವಾಗತ ದೊರಕಿತ್ತು. ಇನ್ನು ಮುಂದಿನ ವರ್ಷ ಏಷ್ಯನ್ ಚಾಂಪಿಯನ್ ಶಿಪ್ ಮತ್ತು ವಿಶ್ವ ಚಾಂಪಿಯನ್ ಶಿಪ್‌ಗೆ ತಯಾರಿ ಆಗಬೇಕಾಗಿದೆ.

ಟೋಕಿಯೋ ಒಲಿಂಪಿಕ್ಸ್ ನತ್ತ ಚಿತ್ತ

ಟೋಕಿಯೋ ಒಲಿಂಪಿಕ್ಸ್ ನತ್ತ ಚಿತ್ತ

ವಿಶ್ವ ಚಾಂಪಿಯನ್ ಶಿಪ್‌ಗೆ ತಯಾರಿ ಶಿಬಿರ ಮುಂದಿನ ಅಕ್ಟೋಬರ್‌ನಲ್ಲಿ ನಿರ್ಧಾರವಾಗಲಿದೆ. 2020ರಲ್ಲಿ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಇರಾದೆ ಇದೆ. ಬುಧವಾರ (ಸೆ.05)ಪ್ರಧಾನಿ ಹಾಗೂ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದು ಅವರು ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ. ಅದೊಂದು ಅದ್ಬುತ ಕ್ಷಣ ಎಂದು ಪೂವಮ್ಮ ಸಂತೋಷ ವ್ಯಕ್ತಪಡಿಸಿದರು.

ನಿವೇಶನ, ಪ್ರೋತ್ಸಾಹ ಧನಕ್ಕೆ ಮನವಿ

ನಿವೇಶನ, ಪ್ರೋತ್ಸಾಹ ಧನಕ್ಕೆ ಮನವಿ

ಇಂಡೋನೇಷ್ಯಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ರಿಲೇಯಲ್ಲಿ ಬಂಗಾರದ ಪದಕ ಗಳಿಸಿ ರಾಜ್ಯ, ರಾಷ್ಟ್ರ, ಮಂಗಳೂರು ನಗರಕ್ಕೆ ಕೀರ್ತಿ ತಂದಿರುವ ಪೂವಮ್ಮ ಅವರಿಗೆ ಮಂಗಳೂರು ನಗರದಲ್ಲಿ ಸರಕಾರಿ ನಿವೇಶನ ಮತ್ತು ಒಂದು ಕೋಟಿ ರೂಪಾಯಿಯನ್ನು ಪ್ರೋತ್ಸಾಹಧನವಾಗಿ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣಕನ್ನಡ ಶಾಸಕ ಡಿ ವೇದವ್ಯಾಸ ಕಾಮತ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. ಪೂವಮ್ಮ ಕುಟುಂಬದವರು ನಾಲ್ಕು ವರ್ಷಗಳ ಹಿಂದೆನೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದನ್ನು ಇನ್ನು ತಡ ಮಾಡದೇ ಆದಷ್ಟು ಬೇಗ ಪೂವಮ್ಮ ಅವರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕರು ಹೇಳಿದರು.

Story first published: Thursday, September 6, 2018, 20:33 [IST]
Other articles published on Sep 6, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+