ಸಾಧನೆಗೆ ಪೋಷಕರ ಪ್ರೋತ್ಸಾಹ ಕಾರಣ
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೂವಮ್ಮ 'ನನ್ನ ಪೋಷಕರ ಪ್ರೋತ್ಸಾಹ, ಬೆಂಬಲದಿಂದಾಗಿಯೇ ನಾನು ಇಂದು ಈ ಸಾಧನೆ ಮಾಡಲು ಸಾಧ್ಯವಾಗಿದೆ. ಅದಕ್ಕಾಗಿ ಪ್ರಥಮವಾಗಿ ನನ್ನ ಈ ಪದಕಗಳು ಪೋಷಕರು ಮತ್ತು ಕೊಡಗಿನ ನೆರೆ ಸಂತ್ರಸ್ತರಿಗೆ ಅರ್ಪಿಸುತ್ತೇನೆ' ಎಂದು ಹೇಳಿದರು.
ವಿಶ್ವ ಚಾಂಪಿಯನ್ ಶಿಪ್ಗೆ ತಯಾರಿ
ತವರಿನ ಸ್ವಾಗತಕ್ಕೆ ತುಂಬಾ ಖುಷಿಯಾಗುತ್ತಿದೆ. 2014ರಲ್ಲಿಯೂ ಪದಕ ಗೆದ್ದು ಮರಳಿದಾಗ ಇದೇ ರೀತಿಯಾದ ಸ್ವಾಗತ ದೊರಕಿತ್ತು. ಇನ್ನು ಮುಂದಿನ ವರ್ಷ ಏಷ್ಯನ್ ಚಾಂಪಿಯನ್ ಶಿಪ್ ಮತ್ತು ವಿಶ್ವ ಚಾಂಪಿಯನ್ ಶಿಪ್ಗೆ ತಯಾರಿ ಆಗಬೇಕಾಗಿದೆ.
ಟೋಕಿಯೋ ಒಲಿಂಪಿಕ್ಸ್ ನತ್ತ ಚಿತ್ತ
ವಿಶ್ವ ಚಾಂಪಿಯನ್ ಶಿಪ್ಗೆ ತಯಾರಿ ಶಿಬಿರ ಮುಂದಿನ ಅಕ್ಟೋಬರ್ನಲ್ಲಿ ನಿರ್ಧಾರವಾಗಲಿದೆ. 2020ರಲ್ಲಿ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಇರಾದೆ ಇದೆ. ಬುಧವಾರ (ಸೆ.05)ಪ್ರಧಾನಿ ಹಾಗೂ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದು ಅವರು ಸಾಕಷ್ಟು ಪ್ರೋತ್ಸಾಹ ನೀಡಿದ್ದಾರೆ. ಅದೊಂದು ಅದ್ಬುತ ಕ್ಷಣ ಎಂದು ಪೂವಮ್ಮ ಸಂತೋಷ ವ್ಯಕ್ತಪಡಿಸಿದರು.
ನಿವೇಶನ, ಪ್ರೋತ್ಸಾಹ ಧನಕ್ಕೆ ಮನವಿ
ಇಂಡೋನೇಷ್ಯಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ರಿಲೇಯಲ್ಲಿ ಬಂಗಾರದ ಪದಕ ಗಳಿಸಿ ರಾಜ್ಯ, ರಾಷ್ಟ್ರ, ಮಂಗಳೂರು ನಗರಕ್ಕೆ ಕೀರ್ತಿ ತಂದಿರುವ ಪೂವಮ್ಮ ಅವರಿಗೆ ಮಂಗಳೂರು ನಗರದಲ್ಲಿ ಸರಕಾರಿ ನಿವೇಶನ ಮತ್ತು ಒಂದು ಕೋಟಿ ರೂಪಾಯಿಯನ್ನು ಪ್ರೋತ್ಸಾಹಧನವಾಗಿ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣಕನ್ನಡ ಶಾಸಕ ಡಿ ವೇದವ್ಯಾಸ ಕಾಮತ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. ಪೂವಮ್ಮ ಕುಟುಂಬದವರು ನಾಲ್ಕು ವರ್ಷಗಳ ಹಿಂದೆನೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದನ್ನು ಇನ್ನು ತಡ ಮಾಡದೇ ಆದಷ್ಟು ಬೇಗ ಪೂವಮ್ಮ ಅವರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕರು ಹೇಳಿದರು.