IPL 2024: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯಲ್ವಾ?; ಈ ಕಾರಣಕ್ಕಾಗಿ ರದ್ದುಗೊಳ್ಳುವ ಸಾಧ್ಯತೆ!
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 17ನೇ ಆವೃತ್ತಿಯ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮಾರ್ಚ್ 22ರಂದು ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಅದ್ಧೂರಿ ಚಾಲನೆ ಸಿಗಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ಗೆ (ಐಪಿಎಲ್) ಕೌಂಟ್ಡೌನ್ ಪ್ರಾರಂಭವಾಗುತ್ತಿದ್ದಂತೆ, ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟಿನ ಕಳವಳಗಳು ನಗರದಲ್ಲಿ ನಿಗದಿಯಾಗಿದ್ದ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಭಾರೀ ಸದ್ದು ಮಾಡುತ್ತಿದೆ.
ಬೆಂಗಳೂರಿನ ನೀರಿನ ಬಿಕ್ಕಟ್ಟಿನ ನಡುವೆ, ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸುವ ಕೂಗು ಉಲ್ಬಣಗೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ #CancelIPL ಟ್ರೆಂಡ್ ಆಗುತ್ತಿದೆ.

ಐಪಿಎಲ್ ಪಂದ್ಯಗಳ ಸಮಯದಲ್ಲಿ ಭಾರೀ ಪ್ರಮಾಣದ ನೀರಿನ ಬಳಕೆಯನ್ನು ಉಲ್ಲೇಖಿಸಿ, ನೆಟ್ಟಿಗರು ಪಂದ್ಯಗಳ ಸ್ಥಳಾಂತರಕ್ಕೆ ಒತ್ತಾಯಿಸುತ್ತಿದ್ದಾರೆ. ಇದು ರಾಜಕೀಯ ಪಕ್ಷಗಳವರೆಗೂ ಸುದ್ದಿ ತಲುಪಿದೆ.
ಮಾರ್ಚ್ 29ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2024ರ ಐಪಿಎಲ್ನ ಮೊದಲ ಪಂದ್ಯ ನಡೆಯಲಿದ್ದು, ಬಿಸಿಸಿಐ ತಮ್ಮ ಮನವಿಗೆ ಮಣಿದು ನೀರಿನ ಕೊರತೆಯಿಲ್ಲದ ರಾಜ್ಯಕ್ಕೆ ಪಂದ್ಯಗಳನ್ನು ಸ್ಥಳಾಂತರಿಸಬೇಕೆಂದು ನಾಗರಿಕರು ಮತ್ತು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸುವ ಬೇಡಿಕೆಯು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಭಾರೀ ವೇಗವನ್ನು ಪಡೆದುಕೊಂಡಿದೆ. ವಿಶೇಷವಾಗಿ ಎಕ್ಸ್ (ಟ್ವಿಟ್ಟರ್) ಖಾತೆಯ ಬಳಕೆದಾರರು #CancelIPL ಎಂಬ ಹ್ಯಾಶ್ಟ್ಯಾಗ್ ಅಡಿಯಲ್ಲಿ ಟ್ರೆಂಡ್ ಮಾಡಿದ್ದಾರೆ.

ಈ ಸಾಮಾಜಿಕ ಮಾಧ್ಯಮದಲ್ಲಿ ಎದ್ದಿರುವ ಕೂಗು ಕುಡಿಯುವ ನೀರಿನ ತೀವ್ರ ಕೊರತೆಯಿಂದ ಬಳಲುತ್ತಿರುವ ಲಕ್ಷಾಂತರ ಬೆಂಗಳೂರಿಗರ ಭಾವನೆಗಳನ್ನು ಪ್ರತಿಧ್ವನಿಸುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹ ಸಚಿವರು ಸೇರಿದಂತೆ ಪ್ರಮುಖ ರಾಜಕೀಯ ವ್ಯಕ್ತಿಗಳಿಗೆ ಐಪಿಎಲ್ ಪಂದ್ಯಗಳ ಸ್ಥಳಾಂತರದ ಕೂಗು ಗಮನ ಸೆಳೆದಿದೆ.
ಅಲ್ಲದೆ, ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸುವ ಪ್ರಯತ್ನಗಳನ್ನು ನೆಟ್ಟಿಗರು ಸಜ್ಜುಗೊಳಿಸುತ್ತಿದ್ದಾರೆ, ಇದು ವಿಷಯದ ತುರ್ತು ವಸ್ತು ಸ್ಥಿತಿಯನ್ನು ಒತ್ತಿಹೇಳುತ್ತದೆ.
ಈ ಸಮಸ್ಯೆಯ ಕೇಂದ್ರ ಬಿಂದುವು ಐಪಿಎಲ್ ಪಂದ್ಯಗಳನ್ನು ಆಯೋಜಿಸುವುದರೊಂದಿಗೆ ಸಂಬಂಧಿಸಿದ ಆಘಾತಗೊಳಿಸುವ ನೀರಿನ ಬಳಕೆಯಲ್ಲಿದೆ. ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಅತಿರೇಕಕ್ಕೇರಿದ್ದು, ನಗರದ ಹಲವು ಕಡೆ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳುವ ಸ್ಥಿತಿ ತಲುಪಿದೆ.
ಎಂ ಚಿನ್ನಸ್ವಾಮಿಯಲ್ಲಿ ಪ್ರತಿ ಪಂದ್ಯವು ಲಕ್ಷಾಂತರ ಲೀಟರ್ ನೀರನ್ನು ಬೇಡುತ್ತದೆ. ಇದು ಬೆಂಗಳೂರಿನಲ್ಲಿ ಈಗಾಗಲೇ ಖಾಲಿಯಾಗಿರುವ ನೀರಿನ ಸಂಪನ್ಮೂಲಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ.
ಈ ಋತುವಿನಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ಒಂಬತ್ತಕ್ಕೂ ಹೆಚ್ಚು ಐಪಿಎಲ್ ಪಂದ್ಯಗಳಿಗೆ ಆತಿಥ್ಯ ವಹಿಸಿಕೊಳ್ಳಲಿದ್ದು, ನೀರಿನ ಬಿಕ್ಕಟ್ಟನ್ನು ಉಲ್ಬಣಗೊಳಿಸುವ ನಿರೀಕ್ಷೆಯು ದೊಡ್ಡದಾಗಿದೆ.
ನೀರಿನ ಕೊರತೆಯಿಂದಾಗಿ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸಿದ ಹಿಂದಿನ ನಿದರ್ಶನಗಳಿಗೆ ಹೋಲಿಸಿದಾಗ, ನಾಗರಿಕರ ಇಂದಿನ ಕೂಗು ಪುನರ್ ಪರಿಶೀಲನೆಗೆ ಒಳಪಡುತ್ತವೆ.
2016ರಲ್ಲಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬರಗಾಲದ ಮಧ್ಯೆ, ಮುಂಬೈ ಹೈಕೋರ್ಟ್ನ ಆದೇಶದ ಮೇರೆಗೆ ಐಪಿಎಲ್ ಪಂದ್ಯಗಳನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications