* ವಿಶ್ವಕಪ್ ಟೂರ್ನಿ ಸನಿಹದಲ್ಲಿರುವ ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಅರ್ಥವಿಲ್ಲದ ಪ್ರಯೋಗ ಮುಂದುವರಿದಿದೆ. ಈ ಹಂತದಲ್ಲಿ ಇದಕ್ಕೆ ಸರಿಯಾದ ಬೆಲೆಯನ್ನೇ ಭಾರತ ತೆರುವಂತಾಗಿದ್ದು ವೆಸ್ಟ್ ಇಂಡಿಸ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಭಾರತ ಭಾರೀ ಅಂತರದಿಂದ ಕಳೆದುಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಸಂಪೂರ್ಣ ವೈಫಲ್ಯ ಕಂಡ ಭಾರತ 6 ವಿಕೆಟ್ಗಳ ಅಂತರದ ಸೋಲು ಕಂಡಿದೆ.
* ತಂಡದ ಸೋಲಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನಿಡುವ ನಿರ್ಧಾರದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಹೀಗಾಗಿ ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಈ ಪಂದ್ಯದಲ್ಲಿ ಅನುಭವಿ ಆಟಗಾರರಿಬ್ಬರು ಯಾವ ಕಾರಣದಿಂದಾಗಿ ಆಡುವ ಬಳಗದಿಂದ ಹೊರಗುಳಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ರಾಹುಲ್ ದ್ರಾವಿಡ್ ಈ ಪಂದ್ಯದಲ್ಲಿನ ಆಯ್ಕೆಯ ಹಿಂದಿನ ಲೆಕ್ಕಾಚಾರಗಳನ್ನು ಹಂಚಿಕೊಂಡಿದ್ದಾರೆ. ಏಷ್ಯಾ ಕಪ್ ಹಾಘೂ ವಿಶ್ವಕಪ್ ಟೂರ್ನಿಬಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಅವರಂತಾ ಆಟಗಾರರ ಸಾಮರ್ಥ್ಯವನ್ನು ಕಂಡುಕೊಳ್ಳಲು ಇದು ಅನಿವಾರ್ಯವಾಗಿತ್ತು ಎಂದಿದ್ದಾರೆ.

* ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಶಸ್ ಟೆಸ್ಟ್ ಸರಣಿಯ ಮೂರನೇ ದಿನದಾಟದ ಬಳಿಕ ಸ್ಟುವರ್ಟ್ ಬ್ರಾಡ್ ಈ ಬಗ್ಗೆ ನಿರ್ಧಾರವನ್ನು ಬಹಿರಂಗಪಡಿಸಿದ್ದು ಪ್ರಸ್ತುತ ನಡೆಯುತ್ತಿರುವ ಓವಲ್ ಟೆಸ್ಟ್ ಪಂದ್ಯವೇ ತನ್ನ ಅಂತಿಮ ಟೆಸ್ಟ್ ಎಂದು ಘೋಷಣೆ ಮಾಡಿದ್ದಾರೆ.
* ಸ್ಟುವರ್ಟ್ ಬ್ರಾಡ್ ತಮ್ಮ ನಿವೃತ್ತಿಯ ಈ ಸಂದರ್ಭದಲ್ಲಿ ಯುವರಾಜ್ ಸಿಂಗ್ ಅವರ ಆ ಆರು ಸಿಕ್ಸರ್ಗಳ ಕ್ಷಣವನ್ನು ನೆನಪಿಸಿಕೊಂಡಿದ್ದು ಆ ಘಟನೆ ತನ್ನನ್ನು ಸ್ಪರ್ಧಾತ್ಮಕವಾಗಿ ಮತ್ತಷ್ಟು ಗಟ್ಟಿಗೊಳಿಸಿತು ಎಂದಿದ್ದಾರೆ."ಖಂಡಿತವಾಗಿಯೂ ಅದೊಂದು ಬಹಳ ಕಠಿಣವಾದ ದಿನ. 21-22ರ ಹರೆಯದಲ್ಲಿ ಹೇಗಾಗಿರಲು ಸಾಧ್ಯ? ಅದರಿಂದ ನಾನು ಸಾಕಷ್ಟು ಕಲಿತಿದ್ದೇನೆ. ಆ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಬಹಳ ಕಡಿಮೆ ಅನುಭವವಿದ್ದ ಕಾರಣ ಆ ಅನುಭವದ ಮೇಲೆಯೇ ನನ್ನ ದಿನಚರಿಯನ್ನು ಆರಮಭಿಸುತ್ತಿದ್ದೆ. ನಾನು ನನ್ನ ಸಿದ್ಧತೆಗೆ ಕಾತರಿಸುತ್ತಿದ್ದೆ. ಆ ಅನುಭವದಿಂದಾಗಿ ನಾನು ಹೋರಾಟದ ಮನೋಭಾವವನ್ನು ರೂಢಿಸಿಕೊಂಡೆ" ಎಂದು ಯುವರಾಜ್ ಸಿಂಗ್ ಅವರು 6 ಎಸೆತಗಳಿಗೆ 6 ಸಿಕ್ಸರ್ ಬಾರಿಸಿದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ ಬ್ರಾಡ್.
* ಇಂಗ್ಲೆಂಡ್ನ ವಿಭಿನ್ನ ಲೀಗ್ ಟೂರ್ನಿ 'ದಿ ಹಂಡ್ರೆಡ್' ಟೂರ್ನಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಆಯೋಜನೆ ಮಾಡುವ ಈ ಲೀಗ್ ಆಗಸ್ಟ್ 1ರಿಂದ ಈ ಆರಂಭವಾಗಲಿದ್ದು ಕುತೂಹಲ ಮೂಡಿಸಿದೆ. ಟ್ರೆಂಟ್ ರಾಕೆಟ್ಸ್ ಹಾಗೂ ಸದರ್ನ್ ಬ್ರೇವ್ ತಂಡಗಳು ಮುಖಾಮುಖಿಯಾಗುವ ಮೂಲಕ ಈ ಟೂರ್ನಿಗೆ ಚಾಲನೆ ದೊರೆಯಲಿದೆ.