ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾರ್ಚ್ 8ರ ಸೋಮವಾರ 2021ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಕೃಷಿ, ನೀರಾವರಿ, ಮೂಲಭೂತ ಸೌಕರ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಇತ್ಯಾದಿಗಳಿಗೆ ಸಂಬಂಧಿಸಿ ಹಲವಾರು ಯೋಜನೆಗಳನ್ನು ಈ ವೇಳೆ ಘೋಷಿಸಲಾಗಿದೆ.
ರಿಷಭ್ ಪಂತ್ ಬ್ಯಾಟಿಂಗ್ಗೆ ಪಾಕ್ ಮಾಜಿ ನಾಯಕನ ಪ್ರಶಂಸೆ: ಸೆಹ್ವಾಗ್ ಬ್ಯಾಟಿಂಗ್ಗೆ ಹೋಲಿಸಿದ ಹಕ್
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿರುವುದರಿಂದ ಈ ಬಾರಿಯ ಬಜೆಟ್ ವೇಳೆ ಮಹಿಳಾ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡಿದ್ದು ಕಂಡುಬಂತು. ಆನ್ಲೈನ್ ಮಾರುಕಟ್ಟೆ, ಭದ್ರತೆ, ಸ್ವಾವಲಂಬನೆಗೆ ಸಂಬಂಧಿಸಿ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.
ಈ ಬಾರಿಯ ಬಜೆಟ್ನಲ್ಲಿ ಕ್ರೀಡಾಕ್ಷೇತ್ರಕ್ಕೆ ಅಂಥ ಆದ್ಯತೆ ನೀಡಿದಂತೆ ಕಾಣುತ್ತಿಲ್ಲ. ಆದರೂ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿ ನಾಲ್ಕು ವಿಚಾರಗಳನ್ನು ಬಜೆಟ್ ವೇಳೆ ತಿಳಿಸಲಾಗಿದೆ. ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ 10 ಕೋ.ರೂ. ಮೀಸಲಿಡಲಾಗಿದೆ.
ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ, ದಿನಾಂಕ, ಸಮಯ ಹಾಗೂ ಸ್ಥಳ
ರಾಜ್ಯ ಬಜೆಟ್ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿ ಕೇಳಿ ಬಂದ ಪ್ರಮುಖ 4 ಸಂಗತಿಗಳಿವು
* 2 ಕೋ.ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ.
* ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಮೂಲಸೌಲಭ್ಯ ನಿರ್ಮಾಣ.
* 10 ಕೋ.ರೂ. ವೆಚ್ಚದಲ್ಲಿ ಮಂಡ್ಯ ನಗರ ಕ್ರೀಡಾಂಗಣದ ಉನ್ನತೀಕರಣ.
* 2022ರಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯ ಕ್ರೀಡಾಕೂಟ ಆಯೋಜನೆ