
ನವದೆಹಲಿ, ಸೆಪ್ಟೆಂಬರ್ 20: ಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದ್ದು, ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರು ಆಯ್ಕೆಯಾಗಿದ್ದಾರೆ.
ಪ್ರಕಟಿಸಲಾಗಿರುವ 2018ರ ರಾಷ್ಟ್ರೀಯ ಕ್ರೀಡಾ ಪುರಸ್ಕಾರದಲ್ಲಿ 8 ಮಂದಿ ದ್ರೋಣಾಚಾರ್ಯ ಪ್ರಶಸ್ತಿಗೆ, 20 ಮಂದಿಗೆ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೀರಾ ಮತ್ತು ವಿರಾಟ್ ಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಸೆಪ್ಟೆಂಬರ್ 25ರಂದು ರಾಷ್ಟ್ರಪತಿ ಭವನದಲ್ಲಿ ನೀಡಲಾಗುತ್ತದೆ.
ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಐಸಿಸಿ ರ್ಯಾಂಕಿಂಗ್ ನ ಅಗ್ರ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ,ಮತ್ತು ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಗೇಮ್ಸ್ ನ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಅವರು ಚಿನ್ನದ ಪದಕ ಜಯಿಸಿದ್ದರು.