ಖೇಲ್ ರತ್ನ, ಅರ್ಜುನ, ದ್ರೋಣ, ಧ್ಯಾನ್ ಚಂದ್ ಪ್ರಶಸ್ತಿ ಪ್ರಕಟ
ನವದೆಹಲಿ, ಆಗಸ್ಟ್ 22: ಪ್ಯಾರಲಂಪಿಯನ್ ದೇವೇಂದ್ರ ಝಂಝಾರಿಯಾ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಅಯ್ಕೆ ಮಾಡಿ ಕ್ರೀಡಾ ಸಚಿವಾಲಯವು ಮಂಗಳವಾರ(ಆಗಸ್ಟ್22)ದಂದು ಪ್ರಕಟಿಸಿದೆ.
ದ್ರೋಣಾಚಾರ್ಯ ಪ್ರಶಸ್ತಿಗೆ ಕಡೆಗಣನೆ, ಕನ್ನಡಿಗನಿಗೆ ಅನ್ಯಾಯ
ಕ್ರಿಕೆಟರ್ ಚೇತೇಶ್ವರ್ ಪೂಜಾರಾ ಹಾಗೂ ಮಹಿಳಾ ಕ್ರಿಕೆಟರ್ ಹರ್ಮನ್ ಪ್ರೀತ್ ಕೌರ್ ಅವರ ಹೆಸರು ಅರ್ಜುನ ಪ್ರಶಸ್ತಿಯಲ್ಲಿ ಕಂಡು ಬಂದಿದೆ. ಕರ್ನಾಟಕ ರಾಜ್ಯದಿಂದ ಹಾಕಿ ಆಟಗಾರ ಎಸ್.ವಿ.ಸುನಿಲ್ ಮತ್ತು ಶೂಟರ್ ಪ್ರಕಾಶ್ ನಂಜಪ್ಪ ಅವರಿಗೆ ಅರ್ಜುನ ಪ್ರಶಸ್ತಿ ಲಭಿಸಿದೆ.

2017ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಇಬ್ಬರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ, 7 ಮಂದಿ ಕೋಚ್ ಗಳಿಗೆ ದ್ರೋಣಾಚಾರ್ಯ ಪ್ರಶಸ್ತಿ, 17 ಮಂದಿ ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಹಾಗೂ ಮೂವರಿಗೆ ಧ್ಯಾನ್ ಚಂದ್ ಪ್ರಶಸ್ತಿ ಘೋಷಣೆಯಾಗಿದೆ.

ಪ್ರಶಸ್ತಿ ವಿಜೇತರಿಗೆ ಆಗಸ್ಟ್ 29, 2017ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್, ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರ ಹೆಸರು ಖೇಲ್ ರತ್ನ ಪ್ರಶಸ್ತಿಗೆ ಕಳಿಸುವಲ್ಲಿ ಕ್ರೀಡಾ ಸಮಿತಿಗಳೂ ವಿಳಂಬ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀವ್ ಗಾಂಧಿ ಖೇಲ್ ಪ್ರಶಸ್ತಿಯು ಫಲಕ, 7.5 ಲಕ್ಷ ರು ನಗದು ಹೊಂದಿರುತ್ತದೆ. ಅರ್ಜುನ, ದ್ರೋಣಾಚಾರ್ಯ ಹಾಗೂ ಧ್ಯಾನ್ ಚಂದ್ ಪ್ರಶಸ್ತಿಯು 5 ಲಕ್ಷ ರು ನಗದು ಹೊಂದಿದೆ.
Story first published: Wednesday, January 3, 2018, 10:16 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications