ನವದೆಹಲಿ, ಆಗಸ್ಟ್ 22: ಪ್ಯಾರಲಂಪಿಯನ್ ದೇವೇಂದ್ರ ಝಂಝಾರಿಯಾ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಅಯ್ಕೆ ಮಾಡಿ ಕ್ರೀಡಾ ಸಚಿವಾಲಯವು ಮಂಗಳವಾರ(ಆಗಸ್ಟ್22)ದಂದು ಪ್ರಕಟಿಸಿದೆ.
ದ್ರೋಣಾಚಾರ್ಯ ಪ್ರಶಸ್ತಿಗೆ ಕಡೆಗಣನೆ, ಕನ್ನಡಿಗನಿಗೆ ಅನ್ಯಾಯ
ಕ್ರಿಕೆಟರ್ ಚೇತೇಶ್ವರ್ ಪೂಜಾರಾ ಹಾಗೂ ಮಹಿಳಾ ಕ್ರಿಕೆಟರ್ ಹರ್ಮನ್ ಪ್ರೀತ್ ಕೌರ್ ಅವರ ಹೆಸರು ಅರ್ಜುನ ಪ್ರಶಸ್ತಿಯಲ್ಲಿ ಕಂಡು ಬಂದಿದೆ. ಕರ್ನಾಟಕ ರಾಜ್ಯದಿಂದ ಹಾಕಿ ಆಟಗಾರ ಎಸ್.ವಿ.ಸುನಿಲ್ ಮತ್ತು ಶೂಟರ್ ಪ್ರಕಾಶ್ ನಂಜಪ್ಪ ಅವರಿಗೆ ಅರ್ಜುನ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ವಿಜೇತರಿಗೆ ಆಗಸ್ಟ್ 29, 2017ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು.