
ಮೂಲಗಳ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹೊಸ ಆಯ್ಕೆ ಸಮಿತಿಯನ್ನು 2023ರ ಜನವರಿಯಲ್ಲಿ ರಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಾಜಿ ಕ್ರಿಕೆಟ್ ಆಟಗಾರ ಅಶೋಕ್ ಮಲ್ಹೋತ್ರಾ, ಜತಿನ್ ಪರಂಜ್ಪೆ ಮತ್ತು ಸುಲಕ್ಷಣಾ ಮೇಲ್ ಅವರನ್ನೊಳಗೊಂಡ ಮಂಡಳಿಯ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಹೊಸ ಆಯ್ಕೆ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಶುಕ್ರವಾರ, ಡಿಸೆಂಬರ್ 30ರಂದು ಸಭೆ ಸೇರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ನಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚೇತನ್ ಶರ್ಮಾ ನೇತೃತ್ವದ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಯನ್ನು ವಜಾಗೊಳಿಸಿತು ಮತ್ತು ಹೊಸ ಅರ್ಜಿಗಳನ್ನು ಆಹ್ವಾನಿಸಿತು.
ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಅವರಲ್ಲದೆ, ಆಯ್ಕೆ ಸಮಿತಿಯ ಸದಸ್ಯರಾದ ಸುನಿಲ್ ಜೋಶಿ, ಹರ್ವಿಂದರ್ ಸಿಂಗ್ ಮತ್ತು ದೇಬಶಿಶ್ ಮೊಹಾಂತಿ ಅವರನ್ನು ವಜಾ ಮಾಡಿತ್ತು.
ದೇಶದಲ್ಲಿ ಕ್ರಿಕೆಟ್ನ ಉನ್ನತ ಆಡಳಿತ ಮಂಡಳಿಯ ಬಿಡುಗಡೆಯು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರಿಗೆ ಮಾನದಂಡಗಳನ್ನು ಉಲ್ಲೇಖಿಸಿದೆ.
"ಕನಿಷ್ಠ 7 ಟೆಸ್ಟ್ ಪಂದ್ಯಗಳು ಮತ್ತು 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ಏಕದಿನ ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು," ಎಂದು ಬಿಸಿಸಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿತ್ತು.
"ಕನಿಷ್ಠ 5 ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು ಮತ್ತು ಒಟ್ಟು 5 ವರ್ಷಗಳ ಕಾಲ ಯಾವುದೇ ಕ್ರಿಕೆಟ್ ಸಮಿತಿಯ (ಬಿಸಿಸಿಐನ ನಿಯಮಗಳು ಮತ್ತು ನಿಬಂಧನೆಗಳಲ್ಲಿ ವ್ಯಾಖ್ಯಾನಿಸಿರುವಂತೆ) ಸದಸ್ಯರಾಗಿರುವ ಯಾವುದೇ ವ್ಯಕ್ತಿ ಪುರುಷರ ಆಯ್ಕೆ ಸಮಿತಿ ಸದಸ್ಯರಾಗಿರಲು ಅರ್ಹರಾಗಿರುವುದಿಲ್ಲ," ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿತ್ತು. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 28, 2022 ಕೊನೆಯ ದಿನಾಂಕವಾಗಿತ್ತು.
ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ 2022ರ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಹತ್ತು ವಿಕೆಟ್ಗಳ ಅವಮಾನಕರ ಸೋಲಿನ ನಂತರ ಆಯ್ಕೆ ಸಮಿತಿ ವಜಾದಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.