ದೇಶದಲ್ಲಿ ರಾಮಲಾಲಾ ಪ್ರತಿಷ್ಠಾ ಸಮಾರಂಭದ ಸಡಗರ ಮನೆ ಮಾಡಿದೆ. ರಾಮ ಮಂದಿರದ ಲೋಕಾರ್ಪಣೆ ಕಾರ್ಯ ಸಹ ಭರದಿಂದ ನಡೆದಿದೆ. ಈಗಾಗಲೇ ಹಲವು ಗಣ್ಯರಿಗೆ ಆಮಂತ್ರಣವನ್ನು ನೀಡಲಾಗಿದೆ. ಪಾಕಿಸ್ತಾನ ಮಾಜಿ ಕ್ರಿಕೆಟ್ ಆಟಗಾರ ಸಹ ರಾಮ ಮಂದಿರದ ಕುರಿತು ಹೇಳಿಕೆ ನೀಡಿದ್ದಾರೆ.
ಈ ಸಮಯದಲ್ಲಿ ಪ್ರಪಂಚದಾದ್ಯಂತ ರಾಮ ಮಂದಿರದ ಬಗ್ಗೆ ಚರ್ಚೆ ನಡೆಯುತ್ತಿದೆ. ಅಯೋಧ್ಯೆಗೆ ರಾಮ ಬರುತ್ತಿರುವುದು ಎಲ್ಲರಿಗೂ ಖುಷಿ ತಂದಿದೆ. ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದನಿಶ್ ಕನೇರಿಯಾ ರಾಮಮಂದಿರದ ಕುರಿತು ಹೇಳಿಕೆ ನೀಡಿದ್ದಾರೆ. ಅವರು ರಾಮಲಾಲಾ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ.

ಗುರುವಾರ, ರಾಮ ಮಂದಿರದ ಗರ್ಭಗುಡಿಯಲ್ಲಿ ಹೊಸ ರಾಮಲಾಲಾ ವಿಗ್ರಹವನ್ನು ಸ್ಥಾಪಿಸಲಾಯಿತು. ಅದರ ಚಿತ್ರ ಚರ್ಚೆಯಲ್ಲಿದೆ. ಅದನ್ನು ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಅನುಭವಿ ಲೆಗ್ ಸ್ಪಿನ್ನರ್ ದನಿಶ್ ಕನೇರಿಯಾ ಕೂಡ ಹೊಸ ಪ್ರತಿಮೆಯ ಚಿತ್ರವನ್ನು ಹಂಚಿಕೊಂಡಿದ್ದು ತಮ್ಮ ಮನದಾದಳ ಮಾತನ್ನು ಹಂಚಿಕೊಂಡಿದ್ದಾರೆ.
ದನಿಶ್ ಕನೇರಿಯಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಬರೆದು ಕೊಂಡಿದ್ದಾರೆ. ರಾಮಮಂದಿರದ ಬಗ್ಗೆ ಕನೇರಿಯಾ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿಲ್ಲ. ಈ ಹಿಂದೆಯೂ ರಾಮಮಂದಿರದ ಬಗ್ಗೆ ಹಲವು ಬಾರಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಅವರು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ವಿಶೇಷ ರಜೆ ನೀಡಿದ್ದಕ್ಕಾಗಿ ಮಾರಿಷಸ್ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದರು. ಇನ್ನು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿರುವ ದನೀಶ್, ನನ್ನ ರಾಮಲಾಲಾ ವಿರಾಜಮಾನರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಲೋಕಾರ್ಪಣೆ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಇಡೀ ದೇಶದಲ್ಲಿ ಭಾರೀ ಉತ್ಸಾಹವಿದೆ. ಈ ಸಮಾರಂಭದಲ್ಲಿ ದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕ್ರಿಕೆಟ್ ಜಗತ್ತಿನ ಹಲವು ದೊಡ್ಡ ತಾರೆಯರಿಗೂ ಸಮಾರಂಭಕ್ಕೆ ಆಹ್ವಾನ ಬಂದಿದೆ.
ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್, ಭಾರತದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ ಮತ್ತು ಭಾರತದ ದಿಗ್ಗಜ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಆದರೆ, ಇವರಲ್ಲಿ ಯಾರು ಅಯೋಧ್ಯೆಗೆ ಹೋಗುತ್ತಾರೆ? ಇದು ಇನ್ನೂ ದೃಢಪಟ್ಟಿಲ್ಲ. ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಅಯೋಧ್ಯೆಗೆ ಹೋಗಲು ಬಿಸಿಸಿಐನಿಂದ ಅನುಮತಿ ಪಡೆದಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಇಲ್ಲಿಯವರೆಗೆ ಸುಮಾರು 7 ಸಾವಿರ ವಿಶೇಷ ಜನರನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಕ್ರಿಕೆಟಿಗರನ್ನು ಹೊರತುಪಡಿಸಿ ಚಿತ್ರರಂಗದ ಪ್ರಮುಖರು ಮತ್ತು ಖ್ಯಾತ ಉದ್ಯಮಿಗಳೂ ಸೇರಿದ್ದಾರೆ. ಈ ಸಮಾರಂಭದ ಮುಖ್ಯ ಅತಿಥಿಯಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.