Rishabh Pant: ಮಾತೃ ವಿಯೋಗದ ನಡುವೆಯೂ ರಿಷಭ್ ಪಂತ್ ಶೀಘ್ರ ಚೇತರಿಕೆಗೆ ಹಾರೈಸಿದ ಪ್ರಧಾನಿ ಮೋದಿ

ದೆಹಲಿಯಿಂದ ರೂರ್ಕಿಗೆ ಹಿಂತಿರುಗುವಾಗ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಬದುಕುಳಿದಿರುವ ಭಾರತದ ವಿಕೆಟ್ ಕೀಪಿಂಗ್ ಬ್ಯಾಟರ್ ರಿಷಭ್ ಪಂತ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
25 ವರ್ಷದ ಯುವ ಕ್ರಿಕೆಟಿಗ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯ ಮೂಲಗಳು ತಿಳಿಸಿವೆ.
ರಿಷಭ್ ಪಂತ್ ಅವರ ಅಪಘಾತದ ಸುದ್ದಿಯಿಂದ ತಾನು ದುಃಖಿತನಾಗಿದ್ದೇನೆ ಮತ್ತು ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
"ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ," ಎಂದು ಮೋದಿ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಅವರು ರಿಷಭ್ ಪಂತ್ ತಮ್ಮ ಮರ್ಸಿಡಿಸ್ ಬೆಂಜ್ ಕಾರನ್ನು ನರ್ಸನ್ ಗಡಿಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಕಾರು ಬೆಂಕಿ ಹೊತ್ತಿಕೊಂಡು ಉರಿದಿದೆ ಎಂದು ಹೇಳಿದ್ದಾರೆ.
ಉತ್ತರಾಖಂಡದ ಪೊಲೀಸ್ ಮಹಾನಿರ್ದೇಶಕರ ಪ್ರಕಾರ, ಚಾಲನೆ ಮಾಡುವಾಗ ನಿದ್ರಿಸಿದ ನಂತರ ಕಾರಿನ ನಿಯಂತ್ರಣವನ್ನು ಕಳೆದುಕೊಂಡಿದ್ದೇನೆ ಎಂದು ರಿಷಭ್ ಪಂತ್ ಹೇಳಿದ್ದಾರೆಂದು ತಿಳಿಸಿದ್ದಾರೆ.
ಕಾರಿನಲ್ಲಿ ರಿಷಭ್ ಪಂತ್ ಒಬ್ಬರೇ ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಪಂತ್ ಅವರ ತಲೆ, ಬೆನ್ನು ಮತ್ತು ಕಾಲಿಗೆ ಗಾಯಗಳಾಗಿವೆ. ರೂರ್ಕಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದ 25 ವರ್ಷದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ರಿಷಭ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಬಹಳ ಕಷ್ಟಪಟ್ಟು ಬೆಂಕಿಯನ್ನು ಹತೋಟಿಗೆ ತರಲಾಯಿತು. ಅದೇ ಸಮಯದಲ್ಲಿ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಿಷಭ್ ಪಂತ್ ಅವರನ್ನು ದೆಹಲಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮ್ಯಾಕ್ಸ್ ಆಸ್ಪತ್ರೆಯ ಡಾ. ಆಶಿಶ್ ಯಾಗ್ನಿಕ್, ರಿಷಭ್ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರನ್ನು ಸಂಪೂರ್ಣವಾಗಿ ಪರೀಕ್ಷಿಸಿದ ನಂತರ ಅವರ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.
"ಕ್ರಿಕೆಟಿಗ ರಿಷಭ್ ಪಂತ್ ಮೂಳೆಚಿಕಿತ್ಸಕರು ಮತ್ತು ಪ್ಲಾಸ್ಟಿಕ್ ಸರ್ಜನ್ಗಳ ವೀಕ್ಷಣೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಪರೀಕ್ಷಿಸಿದ ನಂತರ ಅವರ ವಿವರವಾದ ವೈದ್ಯಕೀಯ ಬುಲೆಟಿನ್ ಅನ್ನು ಬಿಡುಗಡೆ ಮಾಡಲಾಗುತ್ತದೆ. ಅದರ ನಂತರ, ನಾವು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ," ಡಾ. ಯಾಗ್ನಿಕ್ ತಿಳಿಸಿದ್ದಾರೆ.
ಫೆಬ್ರವರಿಯ ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮುಂಚಿತವಾಗಿ ಶಕ್ತಿ ಮತ್ತು ಕಂಡೀಷನಿಂಗ್ ತರಬೇತಿಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಗೆ ಸೇರಬೇಕಿದ್ದ ಕಾರಣ, ಜನವರಿ 3ರಂದು ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧ ಮುಂಬರುವ ವೈಟ್-ಬಾಲ್ ಸರಣಿಯಿಂದ ರಿಷಭ್ ಪಂತ್ ಹೊರಗುಳಿದಿದ್ದರು.
ರಿಷಭ್ ಪಂತ್ ಇದುವರೆಗೆ 33 ಟೆಸ್ಟ್ಗಳಲ್ಲಿ ಐದು ಶತಕ ಮತ್ತು 11 ಅರ್ಧಶತಕಗಳ ಸಹಾಯದಿಂದ 2,271 ರನ್ ಗಳಿಸಿದ್ದಾರೆ. ಅವರು 30 ಏಕದಿನ ಮತ್ತು 66 ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications