ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು: ಅಂತಾರಾಷ್ಟ್ರೀಯ ಕ್ರೀಡಾಪಟು ಸತ್ಯನಾರಾಯಣ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದಲ್ಲಿ ಉತ್ತಮ ಕ್ರೀಡಾಪಟುವಾಗಿ ದೇಶಕ್ಕೆ ಕೀರ್ತಿಯನ್ನು ತರುತ್ತಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರೀಡಾಪಟು ಮತ್ತು ತರಬೇತುದಾರರಾಗಿರುವ ಸತ್ಯನಾರಾಯಣ ಕರೆ ನೀಡಿದ್ದಾರೆ.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ, ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯ ಹಾಗು ಭಾರತ ಸರ್ಕಾರದ ವಾರ್ತಾ ಶಾಖೆ (ಪಿ.ಐ.ಬಿ) ಆಯೋಜಿಸಿದ್ದ. "ಟೋಕಿಯೋ ಓಲಂಪಿಕ್ಸ್" ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿ ಸತ್ಯನಾರಾಯಣ ಮಾತನಾಡಿದರು.

ಒಬ್ಬ ಉತ್ತಮ ನಾಗರೀಕರಾಗಲು ಕ್ರೀಡೆ ಒಂದು ಮಾಧ್ಯಮವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳ ಮೂಲಕ ದೇಶದಲ್ಲಿನ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ನಾವೆಲ್ಲರು ಕ್ರೀಡಾಪಟುಗಳಿಗೆ ಹಾಗು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿರುವ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಮಹಿಳಾ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗು ತರಬೇತಿಯನ್ನು ನೀಡಿ ಅಂತಾರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದವರು ಹೇಳಿದರು.
ಈ ವೆಬಿನಾರ್ ನಲ್ಲಿ ಪಿ.ಐ.ಬಿ. ಬೆಂಗಳೂರಿನ ಹೆಚ್ಚುವರಿ ಮಹಾ ನಿರ್ದೇಶಕಿ ನತಾಶ ಎಸ್. ಡಿಜೋಜಾ, ಯುವಜನ ಸಬಲೀಕರಣ ಹಾಗು ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯದ ಅಧಿಕಾರಿಗಳು ಹಾಗು ಶಿವಮೊಗ್ಗ, ಹೊಸಪೇಟೆ, ಬಳ್ಳಾರಿಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications