ನವದೆಹಲಿ, ಜೂನ್ 08 : ಭಾರತ ಸರಕಾರ ನೀಡುವ ಪರಮೋಚ್ಚ ನಾಗರಿಕ ಪ್ರಶಸ್ತಿ ಭಾರತರತ್ನವನ್ನು ಹಾಕಿ ದಿಗ್ಗಜ ಧ್ಯಾನ್ ಚಂದ್ ಅವರಿಗೆ ನೀಡುವಂತೆ ಕೋರಿ ಕ್ರೀಡಾ ಸಚಿವಾಲಯ ಪ್ರಧಾನಿ ಕಚೇರಿಗೆ ಪತ್ರ ಬರೆದಿದೆ.
ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಈ ವಿಷಯ ತಿಳಿಸಿದ್ದಾರೆ. 'ಧ್ಯಾನ್ಚಂದ್ ದೇಶಕ್ಕೆ ನೀಡಿದ ಕಾಣಿಕೆ ಅಪಾರ. ಹೀಗಾಗಿ ಅವರಿಗೆ ಭಾರತರತ್ನ ನೀಡುವಂತೆ ಕೋರಲಾಗಿದೆ' ಎಂದು ಗೋಯೆಲ್ ಹೇಳಿದ್ದಾರೆ. []

ಭಾರತ ಕಂಡ ಅಪ್ರತಿಮ ಹಾಕಿ ಆಟಗಾರರಾದ ಧ್ಯಾನ್ಚಂದ್ 1928, 1932 ಮತ್ತು 1936ರ ಒಲಿಂಪಿಕ್ಸ್ ಗಳಲ್ಲಿ ಭಾರತ ಚಿನ್ನ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಅವರು 1979ರಲ್ಲಿ ಮೃತಪಟ್ಟಿರುವ ಧ್ಯಾನ್ಚಂದ್ ಅವರಿಗೆ ಭಾರತರತ್ನ ನೀಡುವಂತೆ ಈ ಹಿಂದೆಯೂ ಕ್ರೀಡಾ ಸಚಿವಾಲಯ ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದಿತ್ತು.
2013ರಲ್ಲಿ ಧ್ಯಾನ್ ಚಂದ್ ಅವರಿಗೆ ಭಾರತರತ್ನ ನೀಡಲು ಯುಪಿಎ ಸರ್ಕಾರ ನಿರ್ಧರಿಸಿತ್ತು. ಆದರೆ, ಏಕಾಏಕಿ ನಿರ್ಣಯ ಬದಲಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಲಾಗಿತ್ತು.