For Quick Alerts
ALLOW NOTIFICATIONS  
For Daily Alerts

ಕೊಲೆ ಪ್ರಕರಣ: ರೈಲ್ವೆ ಇಲಾಖೆಯಿಂದ ರೆಸ್ಲರ್ ಸುಶೀಲ್ ಕುಮಾರ್ ಅಮಾನತು

 Arrested wrestler Sushil Kumar suspended from govt job in Indian Railways

ಮೇ 4ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಖರ್ ಎಂಬ ಕುಸ್ತಿಪಟುವಿನ ಕೊಲೆ ನಡೆದಿತ್ತು. ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತನಾಗಿದ್ದ ರೆಸ್ಲರ್ ಸುಶೀಲ್ ಕುಮಾರ್ ಈ ಕೊಲೆಯಲ್ಲಿ ಶಾಮೀಲಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು. ದಿನದಿಂದ ದಿನಕ್ಕೆ ಜಾಗ ಬದಲಾಯಿಸುತ್ತಾ ತಲೆಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕುಸ್ತಿಪಟು ಸಾಗರ್ ಧಂಖರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿರುವುದಕ್ಕೆ ದೆಹಲಿ ಪೊಲೀಸರ ಬಳಿ ಸಾಕ್ಷ್ಯಗಳಿವೆ ಎನ್ನಲಾಗುತ್ತಿದ್ದು ಇತ್ತೀಚೆಗಷ್ಟೇ ಕೊಲೆ ನಡೆದ ಸ್ಥಳಕ್ಕೆ ಸುಶೀಲ್ ಕುಮಾರ್‌‌ನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದರು. ಇದಾದ ಬೆನ್ನಲ್ಲೇ ಇದೀಗ ಸುಶೀಲ್ ಕುಮಾರ್ ಪಾಲಿಗೆ ಮತ್ತೊಂದು ಕಹಿ ಸುದ್ದಿ ಎದುರಾಗಿದ್ದು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತಾಗಿದ್ದಾರೆ.

ಹೌದು ಸುಶೀಲ್ ಕುಮಾರ್‌‌ ವಿರುದ್ಧ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವ ಕಾರಣದಿಂದಾಗಿ ಅವರನ್ನು ರೈಲ್ವೆ ಇಲಾಖೆಯ ಹುದ್ದೆಯಿಂದ ಅಮಾನತುಗೊಳಿಸಿರುವುದಾಗಿ ಉತ್ತರ ರೈಲ್ವೆಯ ಸಿಪಿಆರ್‌ಒ ದೀಪಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

Story first published: Tuesday, May 25, 2021, 16:08 [IST]
Other articles published on May 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+