ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಬೆಂಗಳೂರು ಓಪನ್ ಗೆದ್ದ ತಮಿಳುನಾಡಿನ ಪ್ರಜ್ಞೇಶ್ ಗುಣೇಶ್ವರನ್

ಬೆಂಗಳೂರು, ನವೆಂಬರ್ 18: ತಮಿಳುನಾಡಿನ ಪ್ರಜ್ಞೇಶ್ ಗುಣೇಶ್ವರನ್ ಅವರು ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ.

ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಜ್ಞೇಶ್ ಅವರು ಭಾರತದ ನಂ.1 ಟೆನಿಸ್ ಪಟು ಎನಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ನಡೆದ ಅಂತಿಮ ಹಣಾಹಣಿಯಲ್ಲಿ ಕೇವಲ 57 ನಿಮಿಷಗಳಲ್ಲಿ ಸಾಕೇತ್ ಮೈನೇನಿ ಅವರನ್ನು ನೇರ ಸೆಟ್​ಗಳಿಂದ ಸೋಲಿಸಿದ ಪ್ರಜ್ಞೇಶ್, ಚೊಚ್ಚಲ ಪ್ರಶಸ್ತಿ ಗೆದ್ದರು.

Bengaluru Open: Prajnesh Gunneswaran emerges champion

ಕೆಎಸ್​ಎಲ್​ಟಿಎ ಕೋರ್ಟ್​ನಲ್ಲಿ ನಡೆದ ಫೈನಲ್​ನಲ್ಲಿ 4ನೇ ಶ್ರೇಯಾಂಕದ ಪ್ರಜ್ಞೇಶ್ ಅವರು 6-2, 6-2 ಸೆಟ್​ಗಳಿಂದ ವೈಲ್ಡ್​ಕಾರ್ಡ್ ಎಂಟ್ರಿ ಪಡೆದಿದ್ದ ಸಾಕೇತ್ ಮೈನೇನಿರನ್ನು ಸೋಲಿಸಿದರು.

ಬೆಂಗಳೂರು ಓಪನ್ ಗೆಲುವಿನೊಂದಿಗೆ ಎಟಿಪಿ ranking​ನಲ್ಲಿ 144ನೇ ಸ್ಥಾನದಿಂದ 109ನೇ ಸ್ಥಾನಕ್ಕೇರಲಿದ್ದು, ಭಾರತದ ನಂ.1 ಆಟಗಾರ ಎನಿಸಲಿದ್ದಾರೆ. ವಿಜೇತ ಪ್ರಜ್ಞೇಶ್ ಗುಣೇಶ್ವರನ್ 15 ಲಕ್ಷ ರೂ. ಬಹುಮಾನ ಜಯಿಸಿದರೆ, ರನ್ನರ್​ಅಪ್ ಸಾಕೇತ್ ಮೈನೇನಿ 9 ಲಕ್ಷ ರೂ. ಪಡೆದರು.

Story first published: Sunday, November 18, 2018, 12:33 [IST]
Other articles published on Nov 18, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X